Skip to main content

ಗಾರಲಪಟ್ಟಿಯ ರಾಮಕೃಷ್ಣನೂ ..... ಕೃಷ್ಣದೇವರಾಯನೂ....

ಗಾರಲಪಟ್ಟಿಯ ರಾಮಕೃಷ್ಣನೂ...                        ಕೃಷ್ಣ ದೇವರಾಯನೂ....

ಈ ಗಾರಲಪಟ್ಟಿ ರಾಮ ಯಾರೆಂದು ಯೋಚಿಸುತ್ತಿದ್ದಿರಿ ಅಲ್ಲವೇ? ಆತ ಬೇರಾರೂ ಅಲ್ಲ, 
ನಮ್ಮ ತೆನಾಲಿ ರಾಮಕೃಷ್ಣ.
ನಾವು ನೀವು ಎಲ್ಲರೂ ಶಾಲೆಗೆ ಹೋಗುವ ಮೊದಲಿನಿಂದಲೂ ತೆನಾಲಿ ರಾಮನ ಕಥೆಗಳನ್ನು ಕೇಳಿಯೋ ಓದಿಯೋ ಬೆಳೆದವರೇ. ಬದನೇಕಾಯಿಯ ಕಳ್ಳತನದಿಂದ ಹಿಡಿದು ಬಾವಿಯೇ ಕಳ್ಳತನವಾದ ಸಮಸ್ಯೆಗಳನ್ನೂ ಪರಿಹರಿಸುವ ಮಕ್ಕಳ ಪಾಲಿನ ಸುಪರ್ ಹೀರೋ ಈತ.

 ಕೃಷ್ಣದವರಾಯನ ಸಮಸ್ಯೆಗಳನ್ನು ತನ್ನ ಜಾಣತನದಿಂದ ಬಗೆಹರಿಸುವ ಈ ರಾಮನ ಪರಿ ಎಲ್ಲರಿಗೂ ಇಷ್ಟ . ತನ್ನ ವಿಶಿಷ್ಟ ಅವಲೋಕನ ಶಕ್ತಿಯಿಂದ ಈ ವಿಕಟಕವಿ ನಮ್ಮ ಜನಮಾನಸದಲ್ಲಿ ಇಂದು  ಮಾಸದೆ ಬದುಕಿದ್ದಾನೆ.. 
                      
     ತೆನಾಲಿ ರಾಮನ ನೈಜ ಹೆಸರು ಗಾರಲಪಟ್ಟಿ ರಾಮಕೃಷ್ಣಯ್ಯ. ನಮ್ಮ ತೆನಾಲಿ ಅಲ್ಲಲ್ಲ..ಗಾರಲಪಟ್ಟಿ ರಾಮಕೃಷ್ಣಯ್ಯ ಹುಟ್ಟಿದ್ದು ಆಂಧ್ರದ ತುಮುಳೂರಿನಲ್ಲಿ. ತಂದೆ ಗಾರಲಪಟ್ಟಿ ರಾಮಯ್ಯ . ತಾಯಿ ಲಕ್ಷ್ಮಮ್ಮ. ರಾಮಯ್ಯನವರು ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಯದಲ್ಲಿ ಅರ್ಚಕರಾಗಿದ್ದರು. ಆದರೆ ದುರದೃಷ್ಟವಶಾತ್ ಅವರು ರಾಮನ ಬಾಲ್ಯದಲ್ಲೇ ತೀರಿಕೊಂಡರು.  ನಂತರ ರಾಮನ ಸೋದರ ಮಾವನ ಮನೆಯಾದ ತೆನಾಲಿಗೆ ಬಂದು ಉಳಿದುಕೊಂಡರು. ಹೀಗಾಗಿ ಗಾರಲಪಟ್ಟಿ ರಾಮಕೃಷ್ಣಯ್ಯ ತೆನಾಲಿ ರಾಮ ಆದ.

                ಆಗ ವಿಜಯನಗರ ಸಾಮ್ರಾಜ್ಯದಲ್ಲಿ ವೈಷ್ಣವ ಮತ್ತು ಶೈವರ ಮದ್ಯೆ ವೈಷಮ್ಯ ಬೆಳೆಯುತ್ತಿತ್ತು.ಈ ಕಾರಣದಿಂದ ಶೈವನಾದ ರಾಮನಿಗೆ ಸಾಂಪ್ರದಾಯಿಕ ಶಿಕ್ಷಣ ಸಿಗಲಿಲ್ಲ. ಆದರೆ ವಿದ್ಯಾಸಕ್ತನಾದ ರಾಮ ಊರಿನ ಶಾಲೆಯ ಬಾಗಿಲಲ್ಲಿ ಅಡಗಿ ನಿಂತು ಪಾಠ ಕಲಿಯುತ್ತಿದ್ದ.ಒಂದು ದಿನ ಹೀಗೆ ಅಡಗಿ ಕುಳಿತಿದ್ದಾಗ ಸಿಕ್ಕಿಬಿದ್ದು ಕಳ್ಳನೆಂದು ಆರೋಪ ಬಂತು. ಇದರಿಂದ ದುಃಖಿತನಾದ ರಾಮನು ಕಾಡಿಗೆ ಹೋದ. ಕಾಡಿನಲ್ಲಿ ಸಿಕ್ಕ ಸನ್ಯಾಸಿಯೊಬ್ಬ ಅವನ ಕಥೆಯನ್ನು ಕೇಳಿ ಕಾಳೀ ಮಾತೆಯ  ಜಪ ಮಾಡಲು ಹೇಳಿದರು. ಹಾಗೇ ಮಾಡಿದಾಗ ಕಾಳಿ ಪ್ರತ್ಯಕ್ಷವಾಗಿ ವರವನ್ನು ಕೊಟ್ಟಿದ್ದು, ವಿಕಟ ಕವಿ ಎಂಬ ಹೆಸರು ಕೊಟ್ಟಿದ್ದು ಎಲ್ಲವೂ ಎಲ್ಲರಿಗೂ ತಿಳಿದ ಕಥೆ. ಆದರೆ ಈ ವಿಕಟ ಕವಿ ಎಂಬ ಹೆಸರಿನಲ್ಲಿ ವಿಕಟ ಎಂದರೆ ವಿಚಿತ್ರ ಎಂಬ ಅರ್ಥ ಬರುತ್ತದೆ . ಜೊತೆಗೆ ವಿಕಟ ಇದು ನಿಕಟ ಎಂಬ ಅರ್ಥವನ್ನು ಕೊಡುತ್ತದೆ. ಹೀಗಾಗಿ ಈ ಹೆಸರು ಕೃಷ್ಣದೇವರಾಯ ಅಥವಾ ಇತರರು ಯಾರಿಂದಲೋ ಬಂದಿರುವ ಸಾಧ್ಯತೆ ಇದೆ.  ಜೊತೆಗೆ ಕಾಳಿಯ ಕಥೆಯೂ ಕಾಳಿದಾಸ ನ ಕಥೆಯಿಂದ  ಪ್ರೇರಿತವಾಗಿ ಬಂದಿರಬಹುದು.  

         ತೆನಾಲಿ ರಾಮನು ಕೃಷ್ಣದೇವರಾಯನ ವಿದೂಶಕನೂ, ಆಪ್ತ ಸಲಹಿಗಾರನೂ ಆಗಿದ್ದನು. ಇವನು ಬಾಲ್ಯದಲ್ಲಿ ಶಿಕ್ಷಣ ಪಡೆಯದೇ ಇದ್ದರೂ ಸಹ ಒಬ್ಬ ಕವಿ ಹಾಗೂ ಪಂದಿತನಾಗಿದ್ದನು. ಈತ ಪಾಂಡುರಂಗ ಮಹತ್ಮಂ, ಚಾತುವ ಇತ್ಯಾದಿ  ಕೃತಿ ರಚಿಸಿದ್ದಾನೆ. ಈತನು ಬಹು ಭಾಷಾ ಪಂಡಿತನು ಆಗಿದ್ದನು. ದಕ್ಷಿಣ ಭಾರತದ ಎಲ್ಲ ಭಾಷೆಗಳನ್ನೂ ಅಂದರೆ ಕನ್ನಡ ,ತೆಲುಗು, ತಮಿಳು, ಮಲೆಯಾಳಂ ಜೊತೆಗೆ ಮರಾಠಿ ಇತ್ಯಾದಿ ಭಾಷೆಗಳನ್ನೂ  ಬಲ್ಲವನಾಗಿದ್ದನು.  
 
         ಆದರೆ ೧೫೩೦ರ ಸುಮಾರಿಗೆ ಶ್ರೀ ಕೃಷ್ಣದೇವರಾಯನು ತೀರಿಕೊಂಡ. ಅವನ ಮಗ ತನ್ನ  ಆರನೇ ವಯಸ್ಸಿನಲ್ಲಿ ಪಟ್ಟಕ್ಕೆರಿದ್ದರೂ ವಿಷಪ್ರಾಶನ ದ ಕಾರಣದಿಂದ  ತೀರಿಕೊಂಡ . ಹೀಗಾಗಿ ಅವನ ತಮ್ಮ  ಅಚ್ಯುತ ದೇವರಾಯ ಪಟ್ಟಕ್ಕೆ ಬಂದ. ವಿಚಿತ್ರವೆಂದರೆ ಅವನು ಆಡಳಿತಕ್ಕೆ ಬಂದ  ನಂತರ  ಅವನು ಊರಿಗೆ ಹೊರಟುಹೋದ. ಅವನ ಮತ್ತು ಅಚ್ಯುತ ರಾಯನ ಮಧ್ಯೆ ಏನಾದರೂ  ಭಿನ್ನಾಭಿಪ್ರಾಯ ಬಂದಿತ್ತೆ? ಅಥವಾ ಇನ್ನೇನಾದರೂ ಕಾರಣವಿತ್ತೆ? ತಿಳಿಯದು. ತೆನಾಲಿರಾಮ ಊರಿಗೆ ಹಿಂದಿರುಗಿದ ನಂತರ  ಕೆಲವು ವರ್ಷಗಳ ಲ್ಲಿ ಹಾವಿನ ಕಡಿತದಿಂದ ತೀರಿಕೊಂಡ.
      
   ತುಮುಲೂರಿನಲ್ಲಿ ಹುಟ್ಟಿ ತೆನಾಲಿಯಲ್ಲಿ ಬೆಳೆದ ಈ ರಾಮ ರಾಜನ ಆಪ್ತನಾಗಿ, ವಿದೂಷಕನಾಗಿ,  ಚಂಡಾಮಾಂದ ಕಥೆಗಳಲ್ಲಿ ಮೆರೆದು ೭೦೦ ವರ್ಷಗಳ ಹಿಂದಿನಿಂದಲೂ  ನಮ್ಮ ಜನರ ಮನದಲ್ಲಿ ಎಂದಿಗೂ ಅಜ'ರಾಮ'ರ 
 
~ವನ್ಯಾ ಸಾಯಿಮನೆ
     ೯ನೇ ತರಗತಿ           

           

                 


Comments

You may like these too...

ಭೂಮಿಯೂ ಒಂದು ಜೀವಿಯೆ?

 ಮೊನ್ನೆ ಬಿಕ್ಕೆ ಗುಡ್ಡಕ್ಕೆ ಹಣ್ಣು ಹೆಕ್ಕಲು ಹೊದಾಗ ಗೌರಿ ಹೂವಿನ ಬಳ್ಳಿಯನ್ನು ಕಂಡೆ. ಅದಾಗಲೆ ಕಂಬಳಿಹುಳವೊಂದು ಎಲೆಗಳನ್ನು ತಿನ್ನುತಿತ್ತು. ಮರುದಿನ ನೋಡಿದಾಗ ಹಕ್ಕಿಯೊಂದು ಅದೇ ಕಂಬಳಿಹುಳಗಳನ್ನು ತಿನ್ನುತಿತ್ತು. ಅಂದರೆ ನಿಸರ್ಗಕ್ಕೆ ಯಾವ ಜೀವಿಗಳೂ ಅತಿಯಾಗಿ ಸಂಖ್ಯೆ ಹೆಚ್ಚಿಸಲು ಕೊಡದೆ ಸಮತೋಲನ ಕಾಪಾಡಲು ಗೊತ್ತಿದೆ ಎಂದಾಯಿತು. ಆದರೆ  ಆಗ ತಾನೆ ಗೌರಿಹೂವು ಚಿಗುರಿದ್ದು ಚಿಟ್ಟೆಗೆ ಹೇಗೆ ಗೊತ್ತಾಯಿತು? ಅಲ್ಲಿಯೆ ಕಂಬಳಿಹುಳ ಹೆಚ್ಚು ಎಲೆಗಳನ್ನು ತಿನ್ನುತ್ತಿದೆ ಎಂಬುದು ಹಕ್ಕಿಗೆ ಹೇಗೆ ಗೊತ್ತಾಯಿತು?  ಮಳೆಗಾಲದಲ್ಲಿ    ಮಣ್ಣು ತೊಳೆದುಹೋದ ನಂತರ ಕೆಲವೇ ದಿನಗಳಲ್ಲಿ ಹೊಸ ಹುಲ್ಲು ಹುಟ್ಟುತ್ತದೆ. ಹಾಗೆಯೇ ಹೊಸ ಮಣ್ಣು ಹಾಕಿದಾಗಲೂ ಸಹ ಬಚ್ಚಲುಬಳ್ಳಿಯಂತಹ ಬಳ್ಳಿಗಳು ನಾವು ಊಹಿಸಲೂ ಸಾಧ್ಯವಿಲ್ಲದ ವೇಗದಲ್ಲಿ  ಬೆಳೆಯುತ್ತವೆ. ಹಕ್ಕಿಗಳು ತಿಂದು ಬಿಸುಟಿದ ಬೀಜಗಳು ಮೊಳಕೆಯೊಡೆದು ಹೊರಬರುತ್ತವೆ.       ಹಾಗಾದರೆ ಭೂಮಿಗೆ ಯಾರು ಹೇಳಿಕೊಟ್ಟಿದ್ದು  ಮಣ್ಣು ತೊಳೆದು ಹೋಗಲಾಗದಂತೆ ಗಿಡ ಹುಟ್ಟಬೇಕೆಂದು? ಯಾರು ಹೇಳಿಕೊಟ್ಟಿದ್ದು ಹಕ್ಕಿಗಳು ಬೀಜ ಪ್ರಸಾರ ಮಾಡಬೇಕೆನ್ನುವುದ್ನನು? ಗದ್ದೆ ಕಟಾವಿನ ಕೆಲವೇ ದಿನಗಳ ನಂತರ ಕೀಟಹಾರಿ ಡ್ರಾಸಿರ ಗಿಡ ಹೇಗೆ ಬರುತ್ತವೆ? ಅಲ್ಲಿ ಹುಟ್ಟಿದರೆ ಮಾತ್ರ ಆಹಾರ ಸಿಗುತ್ತದೆ ಎಂದು ಡ್ರಾಸಿರಾಕ್ಕೆ ಹೇಗೆ ಗೊತ್ತು ?  ಹಾಗಾದರೆ ಭೂಮಿಗೂ ಪ್ರಜ್ನೆ ಇದೆಯೆ? ಭೂಮಿಯೂ ಒಂದು ಜೀವಿಯೆ?       ಈಗ ಜಾಗತಿಕ ವಿಷಯಗಳನ್ನು

ಜರ್ಮನಿಯ ಅಸ್ಪಷ್ಟ ನೆನೆಪುಗಳು!

 ಮೊನ್ನೆ ಹೀಗೆ ಯಾವುದರ  ಬಗ್ಗೆಯೋ ಮಾತಾಡುತ್ತಿದ್ದಾಗ ಮಧ್ಯೆ ಅದೇಕೋ ಜರ್ಮನಿಯ ವಿಷಯ ಹಾದು ಹೋಯಿತು. ಸುಮಾರು ಮೂರೋ ನಾಲ್ಕೊ  ವರ್ಷದವಳಿರುವಾಗ ಅಪ್ಪ Griefwald ನಲ್ಲಿ ಇದ್ದಾಗ   ಮೂರು ತಿಂಗಳು ನಾವೂ ಅಲ್ಲಿಗೆ ಹೋಗಿದ್ದೆವು. ನಾನಾಗ ತುಂಬಾ ಚಿಕ್ಕವಳಿದ್ದುದ್ದರಿಂದ ಅಷ್ಟೇನೂ ಸರಿಯಾಗಿ ನೆನಪಿಲ್ಲ, ಆದರೂ ನನ್ನ ಅಸ್ಪಷ್ಟ ನೆನಪುಗಳನ್ನು ನಿಮ್ಮೊಂದಿಗೆ ಇಲ್ಲಿ ಹಂಚಿಕೊಳ್ಳುತ್ತೇನೆ. ಅದು ಸುಮಾರು ಮೇ ತಿಂಗಳ ಕೊನೆಯ ವಾರವೇನೋ, ನಾವು ಹೊರಟಿದ್ದು. ಬೆಂಗಳೂರಿನಿಂದ ಸುಡು ಬಿಸಿಲಿನ ಓಮಾನ್ ದೇಶಕ್ಕೆ, ನಂತರ Frankfurt ಗೆ ಹೋಗುವುದಾಗಿತ್ತು. ಅದರ ವೀಸಾಕ್ಕಾಗಿ ಚೆನ್ನೈ ವರೆಗೆ ಅಲೆದು ಅಂತೂ ಎರಡನೇ ಪ್ರಯತ್ನದಲ್ಲಿ ವೀಸ ಸಿಕ್ಕಿತ್ತಂತೆ.ನನಗೆ ಅದರ ಬಗ್ಗೆ ಹೆಚ್ಚೇನು ತಿಳಿದಿಲ್ಲ.       ಓಮಾನ್ ವಿಮಾನ ನಿಲ್ದಾಣದಲ್ಲಿ ಚೀನಾಕ್ಕೆ ಟೇಕ್ ಆಫ್ ಆಗಲಿದ್ದ ಕೆಂಪು  ವಿಮಾನದಲ್ಲೇ  ಹೋಗಬೇಕು ಎಂಬ ಡಿಮಾಂಡ್ ಮಾಡಿದ್ದೆ(ನನಗೆ ಕೆಂಪು ಎಂದರೆ ಭಾರಿ ಪ್ರೀತಿಯಾಗಿತ್ತು ಆಗ). ನಮ್ಮ ದುರಾದೃಷ್ಟ, ನಾವು ಪ್ರಯಾಣಿಸುವ ವಿಮಾನ ಹಸಿರು ತಿಳಿ ಹಸಿರು ಬಣ್ಣದ್ದಾಗಿತ್ತು. ಅದು ಹೇಗೊ ನಂಬಿಸಿ ಒಳಗೆ ಕರೆದುಕೊಂಡು ಹೋಗಿದ್ದರೂ ಮತ್ತೆ ಇಳಿದಾಗ ಅದರ ಬಣ್ಣ ಕಂಡುಹೊಯಿತು. ಇನ್ನೇನು ಮಾಡುವುದು? ಅಮ್ಮ "ವಿಮಾನಕ್ಕೆ ಆ ಬಣ್ಣ ಇಷ್ಟ ಆಜಿಲ್ಲ್ಯೆ,ಅದ್ಕೆ ಆಕಾಶದಲ್ಲೆ ಹಾರ್ತಾ ಇರಕಾರೆ ಬೇರೆ ಬಣ್ಣ ಪೇಂಟ್ ಮಾಡಿಗಿದ" ಎಂದು ನಂಬಿಸಿದ್ದಳು! ಅಂತೂ ಸಮಸ್ಯ

ಮರಗಳ ಮಾತನು ಕೇಳಿದಿರಾ?

  ನಾವೆಲ್ಲರೂ ಒಮ್ಮೆಯಾದರೂ ಈ ಕಥೆಯನ್ನು ಕೇಳಿರುತ್ತೇವೆ. ಒಬ್ಬ ಹುಡುಗ ದಿನವೂ ಒಂದು ಮಾವಿನ ಮರದ ಬಳಿ ಆಡಲು ಬರುತ್ತಿರುತ್ತಾನೆ. ಮರಕ್ಕೂ ಅವನನ್ನು ಕಂಡರೆ ತುಂಬಾ ಪ್ರೀತಿ. ಆ ಮರ ಅವನಿಗೆ ಹಣ್ಣುಗಳನ್ನು ಕೊಡುತ್ತಾ ಇರುತ್ತದೆ. ಸಮಯ ಕಳೆದಂತೆ ಹುಡುಗ ದೊಡ್ಡವನಾಗುತ್ತಾನೆ. ಮರದ ಬಳಿ ಬರುವುದನ್ನೇ ಕಡಿಮೆ ಮಾಡುತ್ತಾನೆ. ಒಮ್ಮೆ ಅವನು ಮರ ಇರುವ ದಾರಿಯಲ್ಲಿ ಹೋಗುತ್ತಿರುತ್ತಾನೆ. ಮರ ಅವನನ್ನು ಕರೆಯುತ್ತದೆ. ''ಹುಡುಗಾ, ನಿನಗೆ ಹಣ್ಣು ಬೇಕೆ? ಬಾ ನನ್ನ ಮೇಲೆ ಹತ್ತಿ ಕುಳಿತಿಕೋ.'' ಎಂದು ಕರೆಯುತ್ತದೆ. ಹುಡುಗ ನಿರ್ದಾಕ್ಷಿಣವಾಗಿ '' ನಾನೀಗ ದೊಡ್ಡವನು.ನನಗೆ ಆಡಲು ಸಮಯವಿಲ್ಲ. ನನ್ನ ಗೆಳೆಯರಿಗೆ ಹಣ್ಣು ಬೇಕು. ನೀನು ಕೊಡುತ್ತಿಯಾ?'' ಎಂದು ಉತ್ತರಿಸುತ್ತಾನೆ. ''ಸರಿ. ನೀನೆ ಹಣ್ಣುಗಳನ್ನು ತೆಗೆದುಕೊ'' ಎಂದು ಹೇಳಿ  ಮರವೂ ಸುಮ್ಮನಾಗುತ್ತದೆ. ಕೆಲವು ವರ್ಷಗಳ ನಂತರ ಹುಡುಗ ಮತ್ತೆ ಬರುತ್ತಾನೆ. ಅವನೇಗ ಕೆಲಸ ಮಾಡುತ್ತಿರುವವವನು. ಮರ ಮೊದಲಿನಂತೆ  ಪ್ರೀತಿಯಿಂದ '' ಹುಡುಗಾ, ಬಾ  ನನ್ನ ಕೊಂಬೆಗಳ ಮೇಲೆ ಕುಳಿತು ಆಟವಾಡು. ನನ್ನ ಹಣ್ಣುಗಳನ್ನು ತಿನ್ನು ಎಂದು ಕರೆಯುತ್ತದೆ . ಆಗ ಅವನು ‘’ನನಗೆ ಸಮಯವಿಲ್ಲ. ನನಗೆ ನಿನ್ನ ಕಾಂಡ  ಬೇಕು. ಅದನ್ನು ಮಾರಿ ನಾನು ಹಣ ಗಳಿಸುತ್ತೇನೆ’’ ಎಂದು ಹೇಳುತ್ತಾನೆ.ಮರಕ್ಕೆ ನೋವಾದರೂ ಒಪ್ಪಿಕೊಂಡು ತನ್ನ ಕೊಂಬೆಗಳನ್ನು ಅವನಿಗೆ ನೀಡುತ್ತದೆ. ಹತ್ತ